ನಮ್ಮ ಶಾಲೆಯಲ್ಲಿ ಇಂದು ಬೆಳಗ್ಗೆ 9.30ಕ್ಕೆ ಸರಿಯಾಗಿ 68 ನೆಯ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣದೊಂದಿಗೆ ಸಂಭ್ರಮದಿಂದ ಆಚರಿಸಲಾಯಿತು.ರೊಟೇರಿಯನ್ ಶ್ರೀ ಚಂದ್ರಶೇಖರ್ ಹೆಗ್ಡೆ ಶಾನಾಡಿ ಇವರು ಧ್ವಜಾರೋಹಣ ನೆರವೇರಿಸಿದರು.ಮುಖ್ಯ ಅತಿಥಿಗಳಾಗಿ ಶ್ರೀ ಕರುಣಾಕರ ಶೆಟ್ಟಿ ಸದಸ್ಯರು ಗ್ರಾಮ ಪಂಚಾಯತ್ ಕೆದೂರು, ಶ್ರೀ ಶೇಖರ್ ಶೆಟ್ಟಿ ಅಧ್ಯಕ್ಷರು ಹಾಲು ಉತ್ಪಾದಕರ ಸಹಕಾರಿ ಸಂಘ ಕೆದೂರು, ಶ್ರೀ ಅರುಣ್ ಕುಮಾರ್ ಶೆಟ್ಟಿ ಉದ್ಯಮಿಗಳು&ಮಾಲಕರು ಶ್ರೀ ಸಿದ್ದಿವಿನಾಯಕ್ ಟೆಂಟ್ ಹೌಸ್ ತೆಕ್ಕಟ್ಟೆ ಇವರು ಭಾಗವಹಿಸಿದ್ದರು.ಹಳೆಯ ವಿದ್ಯಾರ್ಥಿಗಳು, ದಾನಿಗಳು,ವಿದ್ಯಾಭಿಮಾನಿಗಳು, ಪೋಷಕರು,ಪಾಲಕರು ಆಗಮಿಸಿ ಸಮಾರಂಭಕ್ಕೆ ಶುಭ ಕೋರಿದರು. ಶಾಲೆಯ ಬೋಧಕ&ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳಿಂದ ವಂದೇಮಾತರಂ, ಧ್ವಜ ಗೀತೆ ಸುಶ್ರಾವ್ಯವಾಗಿ ಮೂಡಿಬಂತು.
ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಶ್ರೀ ನಿರಂಜನ ನಾಯಕ ಇವರು ಎಲ್ಲರನ್ನೂ ಸ್ವಾಗತಿಸಿ,ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಶೇಖರ್ ನಿರೂಪಿಸಿ ವಂದಿಸಿದರು.ಧ್ವಜಾರೋಹಣ ಕಾರ್ಯಕ್ರಮದ ನಂತರ ಸ್ವಾತಂತ್ರ್ಯ ಸಂಭ್ರಮ ಸಭಾ ಕಾರ್ಯಕ್ರಮ ನಡೆಯಿತು.
No comments:
Post a Comment